Share

ಬೆಳ್ತಂಗಡಿ: ಮನೆಯಲ್ಲಿ ಸಾಕಿದ ಗೋವುಗಳನ್ನು ತಾವೇ ಕಡಿದು ತಮ್ಮದೇ ಅಂಗಡಿಯಲ್ಲಿ ಫ್ರಿಜ್ಜಿನಲ್ಲಿ ಇಟ್ಟು ಮಾರಾಟ ಮಾಡುತ್ತಿದ್ದ ಸಹೋದರರ ಮೇಲೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಹೋಮಾಂಶ ಮಾರಾಟ ಮಾಡುತ್ತಿದ್ದ ಮಲವಂತಿಗೆ
ಅಬ್ದುಲ್‌ ರಜಾಕ್‌ (28)
ಅಂಗಡಿಗೆ ಪೊಲೀಸರು ದಾಳಿ ನಡೆಸಿ ಇಬ್ಬರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಪರವಾನಿಗೆ ಹೊಂದದೇ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಮಾಹಿತಿ ದೊರೆತ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಹೆಚ್‌ ಮಾದರ ಸಿಬ್ಬಂದಿ ದಾಳಿ ನಡೆಸಿದ್ದು, ಒಟ್ಟು 47 ಕೆಜಿ ದನ ಮಾಂಸವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಅಬ್ದುಲ್‌ ರಜಾಕ್‌ ಹಾಗೂ ಅಂಗಡಿಯಲ್ಲಿದ್ದ ಮತ್ತೋರ್ವ ಆರೋಪಿ ಅಬ್ದುಲ್‌ ರವೂಪ್‌ (20) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವದೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮದಂತೆ ಪ್ರಕರಣ ದಾಖಲಿಸಲಾಗಿದೆ.

ವಧೆ ಮಾಡಲಾದ ಜಾನುವಾರಿನ ಬಗ್ಗೆ ವಿಚಾರಣೆ ನಡೆಸಿದಾಗ, ಆರೋಪಿಗಳು ಅವರ ಮನೆಯಲ್ಲಿ ಸಾಕಿದ್ದ ಜಾನುವಾರನ್ನು ವಧೆ ಮಾಡಿ, ಮಾಂಸ ಮಾರಾಟಕ್ಕೆ ಯತ್ನಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಸಾಕಿದ ಗೋವುಗಳನ್ನು ಮನೆಯಲ್ಲೇ ಕಡಿದು ಅಂಗಡಿಯಲ್ಲಿ ಫ್ರಿಜ್ಜಿನಲ್ಲಿಟ್ಟು ಮಾರಾಟ: ಇಬ್ಬರು ಸಹೋದರರ ಸೆರೆ
Click to comment

Leave a Reply

Your email address will not be published. Required fields are marked *

To Top