ಬೆಳಗಾವಿ: ಸಂಭ್ರಮಾಚರಣೆ ವೇಳೆ ಗುಂಡು ಹಾರಾಟ ನಡೆಸುವ ಅಫ್ಘಾನಿಸ್ತಾನ ತಾಲಿಬಾನ್ ಶೈಲಿಯ ಅನುಕರಣೆ ಕರ್ನಾಟಕದಲ್ಲಿಯೂ ಹೆಚ್ಚಾಗುತ್ತಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಘಟನೆ ನಡೆದಿದೆ. ಇವರು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ
ಸಾವಿರಾರು ಜನರು ಸೇರಿದ್ದ ಜಾತ್ರೆಯಲ್ಲಿ ಸಂತೋಷ್ ಗುಂಡು ಹಾರಾಟ ನಡೆಸಿದ್ದು ಟೀಕೆಗೆ ಗುರಿಯಾಗಿದೆ.
ಹೀಗಾಗಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಲಾಗಿದೆ.
