DAKSHINA KANNADA

ಶರಣ್ ಪಂಪುವೆಲ್  ಮೇಲೆ ಕೇಸ್ ಪ್ರಜಾಪ್ರಭುತ್ವದ ಕಗ್ಗೊಲೆ: ವಿಹಿಂಪ ಸುನಿಲ್ ಕೆಆರ್

Posted on

Share

ಮಂಗಳೂರು: ಗೋ ಹತ್ಯೆ ಮಾಡಿ ಗೋವಿನ ರುಂಡವನ್ನು ಎಸೆದಿರುವ ಕೃತ್ಯವನ್ನು ಖಂಡಿಸಿ ಪತ್ರಿಕಾ ಹೇಳಿಕೆಗೆ ಶರಣ್ ಪಂಪವೆಲ್ ರವರ ಮೇಲೆ ಕೇಸು ದಾಖಲಿಸಿರುದನ್ನು ವಿಶ್ವ ಹಿಂದೂ ಪರಿಷದ್ ಖಂಡಿಸಿದೆ.

ಸುನಿಲ್ ಕೆ ಆರ್ ವಿಶ್ವ ಹಿಂದೂ ಪರಿಷತ್ ಗೋರಕ್ಷ ಪ್ರಮುಖ

ಕಳೆದ ಕೆಲವು ದಶಕಗಳಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿದ್ದ ಗೋಕಳ್ಳತನ /ಗೋಹತ್ಯೆ / ಅಕ್ರಮ ಗೋಸಾಗಾಟದ ಹಿಂದೆ ವ್ಯವಸ್ಥಿತ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದ್ದು ಇಡೀ ಕರಾವಳಿಯ ಜನತೆಗೆ ತಿಳಿದಿರುವ ವಿಷಯ, ಆದರೆ ಯಾರದು ಒತ್ತಡಕ್ಕೆ ಮಣಿದು ಅಥವಾ ರಾಜಕೀಯ ತುಷ್ಟಿಕರಣಕ್ಕಾಗಿ ಆ ಹೇಳಿಕೆಯನ್ನು ಕಾರಣವಾಗಿಟ್ಟುಕೊಂಡು ಕೇಸು ದಾಖಲಿಸಿರುವುದು ಅತ್ಯಂತ ಖಂಡನೀಯ, ಇದರಿಂದ ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ ದಕ್ಕೆಯಾವುದರ ಜೊತೆಗೆ, ಇದರಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಆದುದರಿಂದ ತಕ್ಷಣ ಪೊಲೀಸ್ ಇಲಾಖೆ ಹಾಕಿರುವ ಕೇಸನ್ನು ಹಿಂಪಡೆಯಬೇಕೆಂದು ವಿಿಿಹಿಂಪ ಆಗ್ರಹಿಸಿದೆ.

ಶರಣ್ ಪಂಪವೆಲ್ ರವರಿಗೆ ಚಿಕ್ಕಮಗಳೂರು ಜಿಲ್ಲೆ ನಿರ್ಬಂಧ – ಆದೇಶ ಹಿಂಪಡೆಯಲು ಆಗ್ರಹ

ಚಿಕ್ಕಮಗಳೂರು ಪ್ರವೇಶಿಸದಂತೆ ನಿರ್ಬಂಧ

ಸಂಘಟನಾ ಕಾರ್ಯಕ್ಕೆ ಮತ್ತು ಕಾರ್ಯಕ್ರಮ ದೃಷ್ಟಿಯಿಂದ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಚಿಕ್ಕಮಗಳೂರು ಪ್ರವಾಸಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು ಖಂಡನೀಯ.

ಓಲೈಕೆ ರಾಜಕಾರಣಕೋಸ್ಕರ ಹಿಂದೂ ನಾಯಕರನ್ನು ದಮನಿಸುವ ಕೃತ್ಯವನ್ನು ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರ ಮಾಡುತ್ತಿದ್ದು, ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆ. ತಕ್ಷಣ ಈ ಆದೇಶವನ್ನು ಹಿಂದೆ ಪಡೆಯುವಂತೆ ಆಗ್ರಹಿಸುತ್ತದೆ –  ಸುನೀಲ್ ಕೆ ಆರ್, ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷಾ ಪ್ರಮುಖ್

Most Popular

Exit mobile version