DAKSHINA KANNADA

ರಾಹೆ- 75 ಸಂಚಾರ ಅಸ್ತವ್ಯಸ್ತ: ಧರ್ಮಸ್ಥಳ ಕ್ರಾಸ್ ಬಳಿ ಗುಡ್ಡ ಕುಸಿತ

Posted on

Share

ರಾಷ್ಟ್ರೀಯ ಹೆದ್ದಾರಿ ‌75 ರ ಧರ್ಮಸ್ಥಳ ಕ್ರಾಸ್​​​ನಿಂದ ಸ್ವಲ್ಪ ಮುಂದೆ ಗುಡ್ಡ ಕುಸಿತ ಉಂಟಾಗಿದೆ

ಮಂಗಳೂರು: ಭಾರೀ ಮಳೆಯ ಪರಿಣಾಮ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ವಾಹನ ಸಂಚಾರ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ.

ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಉಂಟಾಗಿದೆ, ಸ್ಥಳದಲ್ಲಿ ಅಧಿಕಾರಿಗಳು ಮಣ್ಣು ತೆರವು ಆರಂಭಿಸಿದ್ದಾರೆ.

ಭೂಕುಸಿತ ಪರಿಣಾಮ ಮಂಗಳೂರು-ಬೆಂಗಳೂರು, ಬೆಂಗಳೂರು-ಮಂಗಳೂರು ಸಾಗುವ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಕಾರು, ಬೈಕ್​ಗಳು ಬದಲಿ ಮಾರ್ಗ ಬಳಸಲು ಎಸ್​​ಪಿ ಡಾ.ಅರುಣ್ ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ‌75 ರ ಧರ್ಮಸ್ಥಳ ಕ್ರಾಸ್​​​ನಿಂದ ಸ್ವಲ್ಪ ಮುಂದೆ ಗುಡ್ಡ ಕುಸಿತ ಉಂಟಾಗಿದ್ದು, ಹೀಗಾಗಿ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ  ಅಡಚಣೆಗಳು ಇಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ ಹೋಗುವವರು ಬದಲಿ ಮಾರ್ಗ ಬಳಸಬೇಕಾಗಿದೆ.

 

Most Popular

Exit mobile version